ವರಕವಿಯ ಪಂಥ


ಕೋಗಿಲೆಯ ಕಂಠಕ್ಕೆ ಸ್ವರ್ಣಪದಕವ ತೊಡಿಸಿ
     ನೇಣು ಬಿಗಿಯುವುದೇಕೆ ಬಹುಮಾನವೆಂದು?
ಹಾರ ಭಾರಕೆ ಗೋಣು ಕುಸಿದು ಕುಗ್ಗಲು, ಗಾನ
     ಕೊರಗಿ ಕರ್ಕಶವಾಗಿ ನರಳುವುದು ನೊಂದು!
ಬಿರುದು ಬಾವಲಿ ಹೆಚ್ಚೆ? ಹೆಸರು ಹೊಗಳಿಕೆ ಹೆಚ್ಚೆ?
     ಪಿಕವರಗೆ ಶಿವ ಕೊಟ್ಟ ಸವಿಗೊರಲಿಗಿಂತ?
ಕೇಳಿ ಸವಿದೆಯ? ಸಾಕು, ಅದೆ ಪರಮ ಬಹುಮಾನ!
     ದಿವ್ಯ ನಿರ್ಲಕ್ಷತೆಯೆ ವರಕವಿಯ ಪಂಥ!

                                   - ಕುವೆಂಪು
  ('ಕೋಗಿಲೆ ಮತ್ತು ಸೋವಿಯತ್ ರಷ್ಯ' ಕವನ ಸಂಕಲನದಿಂದ)

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಉನ್ಮಾದದ ನಶೆ ನಮ್ಮೊಂದಿಗಿಷ್ಟು ಹಂಚಿಕೊಳ್ರಿ....