ಬದುಕು ಮಾಯೆಯ ಮಾಟ


ಬದುಕು ಮಾಯೆಯ ಮಾಟ
ಮಾತು ನೆರೆ ತೊರೆಯಾಟ
ಜೀವಮೌನದ ತುಂಬ ಗುಂಭ ಮುನ್ನೀರು
ಅರುಣೊದಯದ ಕೂಡ ಕರುಣೊದಯವು
ಇರಲು ಎದೆಯ ತುಂಬುತ್ತಿದೆ ಹೊಚ್ಚಹೊನ್ನೀರು

ನಿಜದಲ್ಲೇ ಒಲವಿರಲಿ
ಚೆಲುವಿನಲೇ ನಲಿವಿರಲಿ
ಒಳಿತಿನಲೆ ಗೆಲುವಿರಲಿ ಜೀವ ಗೆಳೆಯ
ಈ ನಾನು ಆ ನೀನು
ಒಂದೆ ತಾನಿನ ತಾನು
ತಾಳ ಲಯ ರಾಗಗಳು ಸಹಜಬರಲಿ

ಆತನಾಕೆಯೆ ನಮ್ಮ
ಜೀವ ನೌಕೆಯ ತಮ್ಮ
ಧ್ರುವ ಮರೆಯದಂತೆ ನಡೆಸುತ್ತಲಿರಲಿ
ದೇವ ಜೀವನ ಕೇಂದ್ರ
ಒಬ್ಬೊಬ್ಬನೂ ಇಂದ್ರ
ಏನಿದ್ದರೂ ಎಲ್ಲ ಎಲ್ಲೆ ತಿಳಿಯಾ

                             - ದ. ರಾ. ಬೇಂದ್ರೆ
('ಗಂಗಾವತರಣ' ಕವನ ಸಂಕಲನದಿಂದ)

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಉನ್ಮಾದದ ನಶೆ ನಮ್ಮೊಂದಿಗಿಷ್ಟು ಹಂಚಿಕೊಳ್ರಿ....