ಕವಿತೆಗೆ

ಚಿತ್ರ ಕೃಪೆ: http://userserve-ak.last.fm
ಇಲ್ಲ, ಇನ್ನು ಬರೆಯಲಾರೆ
        ತೆರೆಯಲಾರೆ ಹೃದಯವ,
ನಿನ್ನ ನಿರೀಕ್ಷಣೆಯೋಳಿನ್ನು
        ತಳ್ಳಲಾರೆ ದಿವಸವ.

ಇಲ್ಲ, ಇನ್ನು ಹಿಡಿಯಲಾರೆ
         ಆ ಮಿಂಚಿನ ಚಾಣವ
ಇನ್ನು ನಾನು ಹೂಡಲಾರೆ
         ಹೆದೆಯೇರಿಸಿ ಬಾಣವ.

ಮತ್ತೆ ಎತ್ತಿ ನಿಲಿಸಲಾರೆ
         ಮುರಿದು ಬಿದ್ದ ಗುಡಿಗಳ
ಸುತ್ತ ಬಿದ್ದ ಬೂದಿಯೊಳಗೆ
         ಹುಡುಕಲಾರೆ ಕಿಡಿಗಳ.

ಬೇಡ ಬೇಡ ಬೇಡ ನನಗೆ
        ನಿನ್ನ ಕೃಪೆಯ ಸಂಕೋಲೆ,
ಇನ್ನೇತಕೆ ನಿನ್ನ ಹಂಗು
        ಕಾವ್ಯಸ್ಫೂರ್ತಿ ಚಂಚಲೆ.

                            - ಜಿ. ಎಸ್. ಶಿವರುದ್ರಪ್ಪ
                    ( 'ಕಾರ್ತೀಕ' ಕವನಸಂಕಲನದಿಂದ)

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಉನ್ಮಾದದ ನಶೆ ನಮ್ಮೊಂದಿಗಿಷ್ಟು ಹಂಚಿಕೊಳ್ರಿ....